ನೇರಳಕಟ್ಟೆ: ಯಂಗ್ ಚಾಲೆಂಜರ್ಸ್ ಅಧ್ಯಕ್ಷರಾಗಿ ಉಪೇಂದ್ರ ಆಚಾರ್ಯ ಆಯ್ಕೆ
Update: 2026-01-26 13:33 IST
ವಿಟ್ಲ: ನೇರಳಕಟ್ಟೆ–ಗಣೇಶನಗರದ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಇದರ 2026–27ನೇ ಸಾಲಿನ ಅಧ್ಯಕ್ಷರಾಗಿ ಉಪೇಂದ್ರ ಆಚಾರ್ಯ ಆಯ್ಕೆಯಾಗಿದ್ದಾರೆ.
ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ವಿಶು ಕುಮಾರ್, ಉಪಾಧ್ಯಕ್ಷರಾಗಿ ಲೋಕೇಶ್, ಕೋಶಾಧಿಕಾರಿಯಾಗಿ ಹರೀಶ್, ಗೌರವ ಕಾರ್ಯದರ್ಶಿಯಾಗಿ ಪ್ರಶಾಂತ್, ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಶರತ್, ಸಂಘಟನಾ ಕಾರ್ಯದರ್ಶಿಯಾಗಿ ಗೌರೀಶ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಸಂಪತ್ ಹಾಗೂ ಅಕ್ಷತ್, ಕ್ರೀಡಾ ಕಾರ್ಯದರ್ಶಿಗಳಾಗಿ ಶಶಿಕಿರಣ್ ಮತ್ತು ಚರಣ್ ಅವರು ಆಯ್ಕೆಯಾದರು.