×
Ad

ಹಳೆಯಂಗಡಿ: 'ರಿಲಯನ್ಸ್'ನಿಂದ ತುರ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Update: 2023-10-17 12:43 IST

ಹಳೆಯಂಗಡಿ, ಅ.17: ಬೊಳ್ಳೂರಿನ ರಿಲಯನ್ಸ್ ಅಸೋಸಿಯೇಶನ್ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಘಟಕದ ಸಹಯೋಗದಲ್ಲಿ 'ತುರ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ'ವು ರವಿವಾರ ಇಲ್ಲಿನ ರಿಲಯನ್ಸ್ ಭವನದಲ್ಲಿ ನಡೆಯಿತು.

ರಿಲಯನ್ಸ್ ಅಧ್ಯಕ್ಷ ಕಲಂದರ್ ಕೌಶಿಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆ ತರಬೇತಿ ಪಡೆಯುವುದು ಬಹಳಷ್ಟು ಅವಶ್ಯಕತೆ ಇದೆ. ಪ್ರಥಮ ಚಿಕಿತ್ಸೆಯಿಂದ ಪ್ರಾಣವನ್ನು ಉಳಿಸಿದ ನಿದರ್ಶನಗಳಿವೆ. ಈ ಹಿನ್ನೆಲೆಯಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತರಬೇತುದಾರ ಸಚೇತ್ ಸುವರ್ಣ ಮಾತನಾಡಿ, ಪ್ರಥಮ ಚಿಕಿತ್ಸೆ ಎಂದರೆ, ಗಾಯ ಅಥವಾ ಅವಘಡಗಳಾದಾಗ ಒದಗಿಸುವ ಆರಂಭಿಕ ಆರೈಕೆ ಎಂಬುದಾಗಿ ವ್ಯಾಖ್ಯಾನಿಸಬಹುದು. ಸಾಮಾನ್ಯವಾಗಿ, ಈ ಆರೈಕೆಯನ್ನು ತಜ್ಞರಲ್ಲದ ತರಬೇತಿ ಪಡೆದ ವೃತ್ತಿಪರ ವ್ಯಕ್ತಿಗಳು ರೋಗಿಗೆ ಅಥವಾ ಗಾಯಾಳುಗಳಿಗೆ, ಸರಿಯಾದ ವೈದ್ಯಕಿಯ ಚಿಕಿತ್ಸೆ ದೊರೆಯುವವರೆಗೆ ಒದಗಿಸುತ್ತಾರೆ. ಪ್ರಥಮ ಚಿಕಿತ್ಸೆ ಎಂಬುದು ಕೆಲವು ಸಂದರ್ಭಗಳಲ್ಲಿ ಸರಳ ಚಿಕಿತ್ಸೆಗಳ ಸರಣಿಯಾಗಿದ್ದರೆ, ಇನ್ನು ಕೆಲವು ಸಂದರ್ಭಗಳಲ್ಲಿ ಮಹತ್ವದ ಜೀವರಕ್ಷಕ ತಂತ್ರವಾಗಿರುತ್ತದೆ ಎಂದು ತರಬೇತಿಯ ವೇಳೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ರಿಲಯನ್ಸ್ ನ ಪ್ರಧಾನ ಕಾರ್ಯದರ್ಶಿ ಮುಬಾರಕ್ ಬೊಳ್ಳೂರು, ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯ ಅಝೀಝ್ ಐ.ಎ.ಕೆ., ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಲೆಕ್ಕ ಪರಿಶೋಧಕ ಅಕ್ಬರ್ ಬೊಳ್ಳೂರು, ಜೊತೆ ಕಾರ್ಯದರ್ಶಿ ರಿಯಾಝ್ ಅಲ್ ಅಕ್ಸಾ, ಮಾಧ್ಯಮ ಉಸ್ತುವಾರಿ ಕಬೀರ್ ಇಂದಿರಾ ನಗರ, ಸಲೆಹೆಗಾರರಾದ ಸಿದ್ದೀಕ್ ಬೊಳ್ಳೂರು, ಶಮೀಮ್ ಬೊಳ್ಳೂರು, ಇಕ್ಬಲ್ ಎಂ.ಎ. ಉಪಸ್ಥಿತರಿದ್ದರು.

ಸ್ಥಳೀಯ ಸಂಘ ಸಂಸ್ಥೆಗಳಾದ ಫೇಮಸ್ ತೋಕೂರು, ಪೂಜಾ ಫ್ರೆಂಡ್ಸ್ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಬೊಳ್ಳೂರು, ಕದಿಕೆ, ಸಾಗ್ ಮಸೀದಿಯ ಸದಸ್ಯರು ಆಡಳಿತ ಮುಖ್ಯಸ್ಥರು ಮತ್ತು ಸಂಸ್ಥೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು.

ಶಿಬಿರದಲ್ಲಿ ಭಾಗವಹಿಸಿದ 45 ಮಂದಿಗೆ ರೆಡ್ ಕ್ರಾಸ್ ಸಂಸ್ಥೆಯ ಪ್ರಮಾಣ ಪತ್ರವನ್ನು ಗಣ್ಯರ ಸಮ್ಮುಖದಲ್ಲಿ ವಿತರಿಸಲಾಯಿತು.

ಸಂಸ್ಥೆಯ ಸಲಹೆಗಾರ ಆರಿಶ್ ನವರಂಗ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಬೀರ್ ಎ.ಆರ್. ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News