ಬೋಳಾರದ ಶಾದಿಮಹಲ್ನಲ್ಲಿ ಸೀರತ್ ಕಾರ್ಯಕ್ರಮ
ಮಂಗಳೂರು, ಡಿ.2: ಯುನಿವೆಫ್ ಕರ್ನಾಟಕವು ‘ಮಾನವ ಧರ್ಮ, ದೈವಿಕ ಕಾನೂನು ಮತ್ತು ಪ್ರವಾದಿ ಮುಹಮ್ಮದ್ (ಸ)’ ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಪ್ರಯುಕ್ತ ಬೋಳಾರದ ಶಾದಿಮಹಲ್ನಲ್ಲಿ ಸೀರತ್ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ‘ನಮ್ಮ ಕುಟುಂಬ ಜೀವನ ಮತ್ತು ಪ್ರವಾದಿ ಮುಹಮ್ಮದ್ (ಸ)’ ಎಂಬ ವಿಷಯದಲ್ಲಿ ಪ್ರಮುಖ ಭಾಷಣದರು.
ಈ ಸಂದರ್ಭ ಮಂಗಳೂರು ಶಾಖೆ ನಡೆಸಿದ ಮಕ್ಕಳ ಪ್ರತಿಭಾ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಅತಿಥಿಯಾಗಿ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ ಭಾಗವಹಿಸಿದ್ದರು. ವೇದಿಕೆಯಲ್ಲಿ ಅಭಿಯಾನದ ಸಂಚಾಲಕ ಸೈಫುದ್ದೀನ್, ಪೂರ್ವ ವಲಯಾಧ್ಯಕ್ಷ ಬಿ.ಎಂ.ಬದ್ರುದ್ದೀನ್, ಮಂಗಳೂರು ಶಾಖಾಧ್ಯಕ್ಷ ಉಬೈದುಲ್ಲಾ ಬಂಟ್ವಾಳ ಉಪಸ್ಥಿತರಿದ್ದರು.
ಕಾರ್ಯದರ್ಶಿ ಯು.ಕೆ. ಖಾಲಿದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನೌಫಲ್ ಹಸನ್ ಕಿರಾಅತ್ ಪಠಿಸಿದರು. ಅಬ್ದುಲ್ಲಾ ಪಾರೆ ಕಾರ್ಯಕ್ರಮ ನಿರೂಪಿಸಿದರು.