×
Ad

ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್‌ಗೆ ಗಡುವು ಇಲ್ಲ: ಆಹಾರ ಇಲಾಖೆಯ ಉಪನಿರ್ದೇಶಕಿ

Update: 2023-12-21 20:31 IST

ಮಂಗಳೂರು: ಗ್ಯಾಸ್ ಬಳಕೆದಾರರು ಏಜನ್ಸಿ ಬಳಿ ತೆರಳಿ ಆಧಾರ್ ಬಯೋಮೆಟ್ರಿಕ್ ಧೃಢೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ದ.ಕ.ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಗ್ಯಾಸ್ ಸಂಪರ್ಕ ಇರುವವರು ಏಜನ್ಸಿ ಬಳಿ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ. ಆದರೆ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಮೊದಲ ಆದ್ಯತೆಯಲ್ಲಿ ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ ಆಧಾರ್ ಸಂಖ್ಯೆಯ ದಾಖಲೆಯೊಂದಿಗೆ ಈ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬಹುದಾಗಿದೆ. ಆದರೆ ಈ ದೃಢೀಕರಣ ನೀಡಲು ಕೇಂದ್ರ ಸರಕಾರವು ಯಾವುದೇ ಗಡುವು ವಿಧಿಸಿಲ್ಲ. ಹಾಗಾಗಿ ಗ್ಯಾಸ್ ಬಳಕೆದಾರರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಆಹಾರ ಇಲಾಖೆಯ ಉಪನಿರ್ದೇಶಕಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News