ತಂಡದಿಂದ ಹಲ್ಲೆ, ಜೀವ ಬೆದರಿಕೆ ಆರೋಪ: ಪ್ರಕರಣ ದಾಖಲು
Update: 2024-01-11 23:07 IST
ಉಳ್ಳಾಲ : ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ತಂಡವೊಂದು ಇಬ್ಬರಿಗೆ ಹಲ್ಲೆ ಮಾಡಿ, ಜೀವಬೆದರಿಕೆ ಒಡ್ಡಿದ ಘಟನೆ ಕೋಟೆಕಾರು ಗ್ರಾಮದ ದೇರಳಕಟ್ಟೆ ಬಳಿ ನಡೆದಿದೆ.
ಹಲ್ಲೆಗೊಳಗಾದವರನ್ನು ವಾಸೀಲ್ ಮತ್ತು ನಿಹಾಲ್ ಎಂದು ಗುರುತಿಸಲಾಗಿದೆ.
ಶಹನಾದ್, ಹಾಸಿಮ್ , ನಾಫಿಲ್ ಮತ್ತು ಮುನ್ನ ಜಾಸಿಮ್ ಎಂಬವರು ಹಲ್ಲೆ ಮಾಡಿ, ಜೀವಬೆದರಿಕೆ ಒಡ್ಡಿದವರು ಎಂದು ದೂರಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.