×
Ad

ಹಣಕಾಸು ಸಚಿವರು ಅನೇಕ ಪ್ರಮುಖ ಘೋಷಣೆಗಳನ್ನು ಮಾಡಿಲ್ಲ: ಪ್ರೊ. ಎಂ.ಎಸ್. ಮೂಡಿತ್ತಾಯ

Update: 2024-02-01 22:42 IST

ಪ್ರೊ. ಎಂ.ಎಸ್. ಮೂಡಿತ್ತಾಯ

ಮಂಗಳೂರು : ನಿರೀಕ್ಷಿಸಿದಂತೆ ಇದೊಂದು ಮಧ್ಯಂತರ ಬಜೆಟ್ ಆಗಿದೆ. ಹಣಕಾಸು ಸಚಿವರು ಅನೇಕ ಪ್ರಮುಖ ಘೋಷಣೆಗಳನ್ನು ಮಾಡಿಲ್ಲ. ಅವರು ಮಾಡಿದ ಕೆಲವು ಪ್ರಸ್ತಾಪಗಳಲ್ಲಿ ತಾಂತ್ರಿಕ ಪರಿಣತ ಯುವ ಸಮೂಹಕ್ಕೆ ಉದ್ದಿಮೆಗಳನ್ನು ಪ್ರಾರಂಭಿಸಲು ಬಡ್ಡಿ ರಹಿತ ಸಾಲ ನೀಡಲು 1 ಲಕ್ಷ ಕೋಟಿ ರೂ. ಮೀಸಲಿರಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಕೃತಕ ಬುದ್ಧಿಮತ್ತೆ (ಎಐ), ರೊಬೊಟಿಕ್ಸ್, ಡೇಟಾ ಸೈನ್ಸಸ್ ಮತ್ತಿತರ ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಶಿಕ್ಷಣ ಪಡೆದವರಿಗೆ ಇದು ಸಹಕಾರಿಯಾಗಬಹುದು ಎಂದು ನಿಟ್ಟೆ ವಿವಿ ಉಪಕುಲಪತಿ ಪ್ರೊ.ಡಾ.ಎಂ.ಎಸ್. ಮೂಡಿತ್ತಾಯ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News