ಬಂಟ್ವಾಳ: ಕೃಷಿಕ ಆತ್ಮಹತ್ಯೆ
ಬಂಟ್ವಾಳ : ಪುತ್ತೂರಿನ ಕೃಷಿಕರೋರ್ವರು ಫರಂಗಿಪೇಟೆ ಸಮೀಪದ ಪೆಲಪಾಡಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಪುತ್ತೂರಿನ ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ನಿವಾಸಿ ಭಾಸ್ಕರ್ ರೈ (53) ಆತ್ಮಹತ್ಯೆ ಮಾಡಿಕೊಂಡವರು. ಅವರು ಪೆಲಪಾಡಿಯಲ್ಲಿರುವ ಪತ್ನಿಯ ತಮ್ಮನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಿತ್ರಂಪಾಡಿಯಲ್ಲಿರುವ ತಮ್ಮ ತೋಟದಲ್ಲಿ ನೀರಿನ ಅಭಾವದಿಂದ ಕೃಷಿ ನಾಶವಾಗಿದ್ದು, ಇದರಿಂದ ಸಾಕಷ್ಟು ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿ ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಪೆಲಪಾಡಿಯಲ್ಲಿರುವ ಪತ್ನಿಯ ತಮ್ಮನ ಮನೆಗೆ ಬಂದು ವಾಸ್ತವ್ಯವಿದ್ದರು. ನಿದ್ರೆ ಬೀಳುತ್ತಿಲ್ಲ ಎಂದು ಮಂಗಳೂರಿನ ವೈದ್ಯರಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎನ್ನಲಾಗಿದೆ.
ಘಟನೆಯ ಕುರಿತು ಭಾಸ್ಕರ್ ಸಹೋದರ ಶುಭಕರ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.