ಬಂಟ್ವಾಳ : ಕಾರು - ಬೈಕ್ ಗಳ ನಡುವೆ ಅಪಘಾತ; ಚಾಲಕನಿಗೆ ಗಾಯ
Update: 2024-05-08 14:31 GMT
ಬಂಟ್ವಾಳ : ಕಾರು ಮತ್ತು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಕುದ್ರೆಬೆಟ್ಟು ನಿವಾಸಿ ಜಯರಾಜ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಕಡೆಯಿಂದ ಹೋಗುತ್ತಿದ್ದ ಕಾರು ಬೈಕ್ ಗೆ ಗುದ್ದಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾಧಿಕಾರಿ ಸುತೇಶ್ ಭೇಟಿ ನೀಡಿದ್ದಾರೆ.