ಸಂಸದ ಸಸಿಕಾಂತ್ ಸೆಂಥಿಲ್ರನ್ನು ಅಭಿನಂದಿಸಿದ ಮಾಜಿ ಸಚಿವ ರಮಾನಾಥ ರೈ
Update: 2024-06-29 20:44 IST
ಮಂಗಳೂರು: ದ.ಕ.ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದರಾಗಿ ಚುನಾಯಿತರಾದ ಸಸಿಕಾಂತ್ ಸೆಂಥಿಲ್ ಅವರನ್ನು ಮಾಜಿ ಸಚಿವ ಬಿ.ರಮಾನಾಥ ರೈ ಶನಿವಾರ ದೆಹಲಿಯ ತಮಿಳುನಾಡು ಭವನದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಪಿಯೂಸ್ ರೋಡ್ರಿಗಸ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಎಸ್. ಉಪಸ್ಥಿತರಿದ್ದರು.