×
Ad

ಪುತ್ತೂರು ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ನೇಮಕ

Update: 2024-09-28 22:15 IST

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ಬ್ಲಾಕ್ ಗಳಾದ ಪುತ್ತೂರು, ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಗೆ ಅಧ್ಯಕ್ಷರ ನೇಮಕ ಮಾಡಲಾಗಿದೆ.

ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಪುತ್ತೂರು ಶಾಸಕ ಅಶೋಕ್ ರೈ ಅವರ ಶಿಪಾರಸ್ಸಿನಂತೆ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸೂಚನೆ ಮೇರೆಗೆ ಈ ನೇಮಕಾತಿ ನಡೆದಿರುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News