×
Ad

ಕೃಷ್ಣಾಪುರ: ಯುನಿವೆಫ್ ನಿಂದ ಸೀರತ್ ಸಮಾವೇಶ

Update: 2024-11-10 16:44 IST

ಸುರತ್ಕಲ್: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಅಭಿಯಾನದ ಪ್ರಯುಕ್ತ ಕೃಷ್ಣಾಪುರ ಪ್ಯಾರಡೈಸ್ ಮೈದಾನದಲ್ಲಿ ಸೀರತ್ ಸಮಾವೇಶ ಜರುಗಿತು.

'ಮಾನವ ಸಂಬಂಧ, ಪರಲೋಕ ಜೀವನ ಮತ್ತು ಪ್ರವಾದಿ ಮುಹಮ್ಮದ್ (ಸ)' ಎಂಬ ವಿಷಯದಲ್ಲಿ ಮಾತನಾಡಿದ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮಾತನಾಡಿದರು.

ಸ್ಥಳೀಯ ಉದ್ಯಮಿ ನವಾಝ್ ಮತ್ತು ಸುರತ್ಕಲ್ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಾನ ಅತಿಥಿಗಳಾಗಿ ಭಾಗವಹಿಸಿದ್ದರು.

ಕೃಷ್ಣಾಪುರ ಶಾಖೆಯ ಸಂಚಾಲಕ ಮುಹಮ್ಮದ್ ಹುದೈಫ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಫಹೀಮುದ್ದೀನ್ ಕಿರಾಅತ್ ಪಠಿಸಿದರು. ಅಭಿಯಾನ ಸಂಚಾಲಕ ವಕಾಝ್ ಅರ್ಶಲನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೃಷ್ಣಾಪುರ ಶಾಖೆಯ ಉಸ್ತುವಾರಿ ಉಸ್ಮಾನ್ ಕೃಷ್ಣಾಪುರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News