×
Ad

ಮುಲ್ಕಿ| ವಿದ್ಯುತ್‌ ಕಂಬಕ್ಕೆ ಬೈಕ್‌ ಢಿಕ್ಕಿ: ಇಬ್ಬರು ಯುವಕರು ಮೃತ್ಯು

Update: 2025-03-18 23:48 IST

ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಸಮೀಪ ನಡೆದಿದೆ.

ಮೂಲತಃ ಧಾರವಾಡ ಜಿಲ್ಲೆ ಸವದತ್ತಿ ಕಲ್ಲೂರು ನಿವಾಸಿಗಳಾದ ಆತ್ಮಾನಂದ (27), ನವೀನ್ ಹೂಗಾರ (26) ಮೃತರು ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ಬೈಕ್‌ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News