×
Ad

ಯುವಕ ನಾಪತ್ತೆ

Update: 2025-04-03 19:23 IST

ಮಂಗಳೂರು,ಎ.3: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕಾಲೇಜಿನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಬಿಹಾರ ಮೂಲದ ಸುಧಾಂಶು ಕುಮಾರ (21) ಕಾಣೆಯಾಗಿದ್ದಾರೆ.

ಸುಮಾರು 5.6 ಅಡಿ ಎತ್ತರದ, ಸಾಧಾರಣ ಶರೀರದ, ಗೋದಿ ಮೈ ಬಣ್ಣದ ಸುಧಾಂಶು ಕುಮಾರ ಕಾಣೆಯಾದ ದಿನ ಕೆಂಪು ಬಣ್ಣದ ಟಿ ಶರ್ಟ್, ಬರ್ಮುಡ ಪ್ಯಾಂಟ್ ಧರಿಸಿದ್ದರು. ಹಿಂದಿ, ಕನ್ನಡ ತುಳು ಭಾಷೆ ಮಾತನಾಡುತ್ತಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ತಿಳಿದಲ್ಲಿ ಪಣಂಬೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News