×
Ad

ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

Update: 2025-05-05 21:50 IST

ಉಡುಪಿ, ಮೇ 5:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9,000 ಗೌರವಧನದ ನೆಲೆಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಮಾಸಿಕ 9,000 ಗೌರವಧನದ ನೆಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಆರ್‌ಡಬ್ಲ್ಯೂ ನೇಮಕಾತಿಗಾಗಿ ಬಾಕಿ ಇರುವ ಗ್ರಾಮ ಪಂಚಾಯತ್‌ಗಳ ವಿವರ: ಉಡುಪಿ ತಾಲೂಕಿನ ಕಡೆಕಾರು ಹಾಗೂ ಮಣಿಪುರ, ಬ್ರಹ್ಮಾವರ ತಾಲೂಕಿನ 38 ಕಳತ್ತೂರು ಹಾಗೂ ಹೆಗ್ಗುಂಜೆ, ಹೆಬ್ರಿ ತಾಲೂಕಿನ ಹೆಬ್ರಿ, ಶಿವಪುರ ಹಾಗೂ ಬೆಳ್ವೆ, ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ, ಕುಂದಾಪುರ ತಾಲೂಕಿನ ಕೆರಾಡಿ ಮತ್ತು ಕಾರ್ಕಳ ತಾಲೂಕಿನ ಕಲ್ಯಾ. ಯು.ಆರ್.ಡಬ್ಲ್ಯೂ ನೇಮಕಾತಿ ಗಾಗಿ ಖಾಲಿ ಇರುವ ಸ್ಥಳೀಯ ಸಂಸ್ಥೆ -ಕುಂದಾಪುರ ಪುರಸಭೆ.

ಎಸೆಸೆಲ್ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರುವ, ಶೇ.40ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ (ಯು.ಡಿ.ಐ.ಡಿ ಕಾರ್ಡ್) ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು ತಮ್ಮ ವಾಸಸ್ಥಳ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯತ್ ಅಥವಾ ಗ್ರಾಮ ಪಂಚಾಯತ್‌ನಿಂದ ಪಡೆದ ವಾಸ್ತವ್ಯ ದೃಢೀಕರಣ ಪತ್ರ ಹಾಗೂ 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಮೇ 20ರ ಒಳಗೆ ಅರ್ಜಿ ಸಲ್ಲಿಸಬಹುದು.

ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮುಖ್ಯಸ್ಥರ ಆಯ್ಕೆ ಸಮಿತಿ ಮೂಲಕ ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂಖ್ಯೆ: 0820-2574810, 2574811 ಅಥವಾ ತಾಲೂಕು ಪಂಚಾಯತ್‌ನಲ್ಲಿರುವ ಎಂ.ಆರ್.ಡಬ್ಲ್ಯೂ (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News