×
Ad

ಯಶಸ್ವಿ ಸೇನಾ ಕಾರ್ಯಚರಣೆ: ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಮನವಿ

Update: 2025-05-08 20:15 IST

ಮಂಗಳೂರು: ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ದೇವನು ಕರುಣಿಸಲು ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಶುಕ್ರವಾರ ಜುಮಾ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಲು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಮನವಿ ಮಾಡಿದ್ದಾರೆ.

ಭಾರತೀಯ ಸೇನೆಯು ಉಗ್ರನೆಲೆಗಳನ್ನು ಧ್ವಂಸ ಮಾಡುವ ಮೂಲಕ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರ ತೀರಿಸಿದೆ. ಭಾರತದ ನೆಮ್ಮದಿಗೆ ಭಂಗ ತರಲು ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಬುದ್ಧಿಕಲಿಸಿದೆ. ಭಾರತೀಯರ ಮೇಲೆ ಯಾವುದೇ ದಾಳಿ ನಡೆದರೂ ಅದನ್ನು ಹಿಮ್ಮೆಟ್ಟಿಸಲು ದೇಶ ಸನ್ನದ್ಧವಾಗಿದೆ ಎಂಬ ಸಂದೇಶವನ್ನು ಈ ಸೇನಾ ಕಾರ್ಯಾಚರಣೆ ತೋರಿಸಿಕೊಟ್ಟಿದೆ. ಅದಕ್ಕಾಗಿ ಸೇನೆಯನ್ನು ಅಭಿನಂದಿಸಿ, ವಿಶೇಷ ಪ್ರಾರ್ಥನೆ ಮಾಡಲು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News