×
Ad

ಓದು ಜ್ಞಾನವನ್ನು ವೃದ್ಧಿಸುತ್ತದೆ: ಶಾಫಿ ಸಖಾಫಿ

Update: 2025-05-09 21:29 IST

ಉಳ್ಳಾಲ: ಓದು ಜ್ಞಾನವನ್ನು ವೃದ್ಧಿಸುತ್ತದೆ. ವಿಚಾರ ತಿಳಿದು ಕೊಳ್ಳಲು ಸಾಧ್ಯ ಆಗುತ್ತದೆ.ಪ್ರವಾದಿಯವರು ಕುರ್ ಆನ್ ಓದಿ ವಿಚಾರ ತಿಳಿದುಕೊಳ್ಳುತ್ತಿದ್ದರು ಎಂದು ಶಾಫಿ ಸಖಾಫಿ ಮುಂಡಂಬ್ರ ಹೇಳಿದರು.

ಅವರು ಉಳ್ಳಾಲ ದರ್ಗಾ ದ 22 ಪಂಚವಾರ್ಷಿಕ ಉರೂಸ್ ಪ್ರಯುಕ್ತ ಗುರುವಾರ ದರ್ಗಾ ವಠಾರದಲ್ಲಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕುರ್ ಆನ್ ಕಥಾ ಪುಸ್ತಕ ಅಲ್ಲ, ಓದಿ ಬಿಸಾಡುವ ಗ್ರಂಥ ಕೂಡ ಅಲ್ಲ. ಈ ಗ್ರಂಥದಲ್ಲಿ ಇಸ್ಲಾಮಿನ ವಿಚಾರಗಳು ಇವೆ .ಇದನ್ನು ಅಧ್ಯಯನ ಮಾಡಿದರೆ ವಿಚಾರ ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದರು.

ಉಸ್ಮಾನ್ ಸಅದಿ ಪಟ್ಟೋರಿ ಧಾರ್ಮಿಕ ಪ್ರವಚನ ನೀಡಿದರು. ಸಯ್ಯಿದ್ ಜಲಾಲುದ್ದೀನ್ ತಂಙಳ್ ಉಜಿರೆ ದುಆ ನೆರವೇರಿಸಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದರ್ಗಾ ಮಾಜಿ ಅಧ್ಯಕ್ಷ ಕಣಚೂರು ಮೋನು,ಮಂಚಿಲ ಮಸೀದಿ ಅಧ್ಯಕ್ಷ ಅಶ್ರಫ್, ಖತೀಬ್ ಅಬ್ಬಾಸ್ ಮದನಿ ಬಂಡಾಡಿ, ಕಣಚೂರು ಮೆಡಿಕಲ್ ಕಾಲೇಜು ನಿರ್ದೇಶಕ ಅಬ್ದುಲ್ ರಹಿಮಾನ್, ಅಬ್ದುಲ್ ಜಲೀಲ್,ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯ ದರ್ಶಿ ಮುಸ್ತಫಾ ಮದನಿನಗರ, ಇಸ್ಹಾಕ್, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಸದಸ್ಯ ಅಬ್ದುಲ್ ಖಾದರ್ ಕೋಡಿ, ಇಮ್ತಿಯಾಝ್, ಅಬೂಬಕ್ಕರ್ ಹೈದರಲಿ ನಗರ,ಅರೆಬಿಕ್ ಕಾಲೇಜು ಪ್ರೊ. ಇಬ್ರಾಹಿಂ ಅಹ್ಸನಿ, ಆಝಾದ್ ಇಸ್ಮಾಯಿಲ್ , ಕೇಂದ್ರ ಜುಮ್ಮಾ ಮಸೀದಿ ಖತೀಬ್ ಹಾಫಿಳ್ ಅಬ್ದುಲ್ ಮಜೀದ್ ಫಾಳಿಲಿ ಕಾಮಿಲ್ ಸಖಾಫಿ , ಉಸ್ಮಾನ್ ಮುಸ್ಲಿಯಾರ್, ಟಿಪ್ಪು ಸುಲ್ತಾನ್ ಕಾಲೇಜು ಪ್ರಾಂಶುಪಾಲ ಸಾಧೀಕ್, ಪ್ರಾದ್ಯಾಪಕ ಅಬ್ದುಲ್ ಸಮದ್, ರಶೀದ್ , ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು.

ದರ್ಗಾ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News