×
Ad

ಬಂಟ್ವಾಳ: ಕಾರು ಢಿಕ್ಕಿ; ಗಾಯಾಳು ವಿದ್ಯಾರ್ಥಿ ಮೃತ್ಯು

Update: 2025-05-14 20:25 IST

ಲಿಖಿತ್

ಬಂಟ್ವಾಳ: ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಮೃತಪಟ್ಟ ವಿದ್ಯಾರ್ಥಿ. ಮಂಗಳವಾರ ಸಂಜೆ ಸುಮಾರು ಬಿ.ಸಿ.ರೋಡಿನಿಂದ ಮನೆ ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾ ಗಿತ್ತು. ಆದರೆ ಈತ ಚಿಕಿತ್ಸೆ ಗೆ ಸ್ಪಂದಿಸದೆ ಇ‌ಂದು ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ.

ಬಂಟ್ವಾಳ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News