×
Ad

ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ: ದ.ಕ. ಡಿಸಿ ಮುಲ್ಲೈ ಮುಗಿಲನ್

Update: 2025-05-14 20:37 IST

ಮಂಗಳೂರು: ಸಮಾಜಕ್ಕೆ ಕೊಡುಗೆ ನೀಡುವ ಸಾಧಕರಾಗಿ ಎಂದು 2025ರ ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರನ್ನು ಅಭಿನಂದಿಸುತ್ತಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕರೆ ನೀಡಿದ್ದಾರೆ.

ಅವರು ಬುಧವಾರ ಡಿ.ಸಿ.ಬಂಗಲೆಯಲ್ಲಿ ಹಮ್ಮಿಕೊಂಡಿದ್ದ 2025ರ ಎಸ್ ಎಸ್ ಎಲ್ ಸಿ,ಪಿಯುಸಿ ಸಾಧಕರ ಸಮಾವೇಶ ವನ್ನು ದ್ದೇಶಿಸಿ ಮಾತನಾಡುತ್ತಿದ್ದರು.

ಸಮಾಜದಲ್ಲಿ ಭವಿಷ್ಯದಲ್ಲಿ ನಮ್ಮಿಂದ ಎಷ್ಟು ಜನರಿಗೆ ಉಪಕಾರ ಆಗುತ್ತದೆ ಎನ್ನುವುದರ ಮೇಲೆ ನಮ್ಮ ಯಶಸ್ಸು ಅಡಗಿದೆ.ನಮ್ಮ ಮೇಲೆ ಮೊದಲು ನಮಗೆ ನಂಬಿಕೆ ಬೇಕು.ಪೊಷಕರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅವಕಾಶ ನೀಡಬೇಕು. ಮಕ್ಕಳ ಸಾಧನೆಯಲ್ಲಿ ಪೋಷಕರ,ಶಿಕ್ಷಕರ ಪಾತ್ರ ಅತ್ಯಂತ ಮಹತ್ವ ದ್ದಾಗಿದೆ. ವಿದ್ಯಾರ್ಥಿ ಗಳು ಕಲಿಕೆಯ ಉದ್ದೇಶ ತಿಳಿದುಕೊಳ್ಳುವುದು ಮುಖ್ಯ.ಕಲಿಕೆಗೆ ಆಸಕ್ತಿಯೂ ಮುಖ್ಯ. ನನ್ನ ಬಾಲ್ಯ ದಲ್ಲಿ ಡಿ.ಸಿ ಬಂಗಲೆ ಬಳಿ ಹೋಗುತ್ತಿದ್ದೆ. ಅಲ್ಲಿ ಇದ್ದ ಡಿ‌.ಸಿ ಹೆಸರು ಗಮನಿಸಿ ಆ ಜಾಗದಲ್ಲಿ ನನ್ನ ಹೆಸರು ಒಂದು ದಿನ ಕಾಣಬೇಕು ಎಂದು ಯೋಚಿಸುತ್ತಿದ್ದೆ. ಅದೇ ಚಿಂತನೆ ನಾನು ಜಿಲ್ಲಾಧಿಕಾರಿ ಯಾಗಲು ಒಂದು ಕಾರಣ ಎಂದರು. ಅದೇ ಕಾರಣಕ್ಕಾಗಿ ಡಿ‌ಸಿ ಬಂಗಲೆಯಲ್ಲಿ ಸಾಧಕರನ್ನು ಕರೆದು ಸನ್ಮಾನಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಮಾತನಾಡುತ್ತಾ, ನೀವು ಪರಿಶ್ರಮ ದಿಂದ ಉತ್ತಮ ಸ್ಥಾನ ಪಡೆದಿದ್ದೀರಿ ಅದನ್ನು ಕಾಯ್ದು ಕೊಳ್ಳುವುದು ಮುಖ್ಯ.ಭವಿಷ್ಯದ ಬಗ್ಗೆ ಚಿಂತನೆ ಮಾಡಿ ಕೊಂಡು ಮುಂದಿನ ಅಧ್ಯಯನ ವೃತ್ತಿಯನ್ನು ಆಯ್ಕೆ ಮಾಡಿ ಕೊಳ್ಳಬೇಕು ಎಂದು ಸಾಧಕರಿಗೆ ಕಿವಿ ಮಾತು ಹೇಳಿ ಶುಭ ಹಾರೈಸಿದರು.ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಮಾತನಾಡುತ್ತಾ, ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಮತ್ತು ಪಿಯುಸಿಯಲ್ಲಿ ಎರಡನೆ ಸ್ಥಾನ ಪಡೆಯಲು ಕಾರಣರಾದ ವಿದ್ಯಾರ್ಥಿ ಸಾಧಕರು, ಪೋಷಕ ರಿಗೆ ಜೊತೆಗೆ ಸಾಧಕರನ್ನು ಪ್ರೋತ್ಸಾಹಿ ಸುತ್ತಿರುವ ನಾಗರೀಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಸಾಧಕ ವಿದ್ಯಾರ್ಥಿ ಗಳು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ,ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ ಗೋಯಲ್, ಡಿಎಫ್ಒ ಆ್ಯಂಟೊನಿ ಮರಿಯಪ್ಪ ಮೊದಲಾದವರು ಶುಭ ಹಾರೈಸಿದರು. ಮಂಜುನಾಥ್ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಕಾರ್ಯಕ್ರಮ ನಿರೂಪಿಸಿದರು.









Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News