ಮಂಗಳೂರು: ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ
ಮಂಗಳೂರು, ಮೇ 17: ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್ಸಿಡಿ ಕೋಶ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ವಿಶ್ವ ಅಧಿಕ ರಕ್ತದೊತ್ತಡ ದಿನದ ಪ್ರಯುಕ್ತ ಶನಿವಾರ ಸೈಕಲ್ ರ್ಯಾಲಿ ಹಾಗೂ ಕಾಲ್ನಡಿಗೆ ಜಾಥಾ ನಡೆಯಿತು.
ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಹಾಗೂ ವೆನ್ಲಾಕ್ ಆಸ್ಪತ್ರೆ ಅಧೀಕ್ಷಕ ಡಾ. ಶಿವಪ್ರಕಾಶ್ ಸೈಕಲ್ ರ್ಯಾಲಿ ಹಾಗೂ ಕಾಲ್ನಡಿಗೆ ಜಾಥಾಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.
ಜಾಥಾವು ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಿಂದ ಆರಂಭಗೊಂಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯವರೆಗೆ ಸಾಗಿತು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜೆಸಿಂತಾ, ತಾಲೂಕು ಆರೋಗ್ಯಾಧಿ ಕಾರಿ ಡಾ.ಸುಜಯ್ ಕುಮಾರ್, ಡಾ.ಅಣ್ಣಯ್ಯ ಕುಲಾಲ್ ಮತ್ತಿತರರು ಭಾಗವಹಿಸಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಸ್ವಾಗತಿಸಿದರು. ಡಾ. ನವೀನ್ಚಂದ್ರ ಕುಲಾಲ್ ವಂದಿಸಿದರು.