×
Ad

ಕೊಲೆಯಾದ ಅಬ್ದುಲ್ ರಹ್ಮಾನ್ ಮನೆಗೆ ಸಲಫಿ ಮೂವ್ ಮೆಂಟ್ ನಿಯೋಗ ಭೇಟಿ

Update: 2025-06-01 10:50 IST

ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಂಟ್ವಾಳ ಕೊಳತ್ತಮಜಲು ನಿವಾಸಿ ಅಬ್ದುಲ್ ರಹ್ಮಾನ್ ಅವರ ನಿವಾಸಕ್ಕೆ ಸೌತ್ ಕರ್ನಾಟಕ ಸಲಫಿ ಮೂವ್ ಮೆಂಟ್ ನಿಯೋಗ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿತು.

ಅಬ್ದುಲ್ ರಹ್ಮಾನ್ ಅವರ ಕುಟುಂಬದ ದುಃಖದಲ್ಲಿ ನಾವು ಕೂಡ ಭಾಗಿಯಾಗುತ್ತೇವೆ. ನಮ್ಮ ಸಂಸ್ಥೆಯಿಂದಾದ ಆರ್ಥಿಕ ಸಹಾಯ ಮಾಡುವುದಾಗಿ ಅಧ್ಯಕ್ಷ ಬಶೀರ್ ಶಾಲಿಮಾರ್ ಭರವಸೆ ನೀಡಿದರು.

ಈ ಸಂದರ್ಭ ಸೌತ್ ಕರ್ನಾಟಕ ಸಲಫಿ ಮೂವ್ ಮೆಂಟ್ ನ ಪದಾಧಿಕಾರಿಗಳು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News