ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ಬಿ ರಮೇಶ್ ಸಾಲ್ಯಾನ್ ಸಂಚಯಗಿರಿ ಆಯ್ಕೆ
Update: 2025-06-11 22:31 IST
ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ ರಮೇಶ್ ಸಾಲ್ಯಾನ್ ಸಂಚಯಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಯಾದವ ಕುಲಾಲ್ ಅಗ್ರಬೈಲು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷೆಯಾಗಿ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ಸೋಮನಾಥ ಸಾಲ್ಯಾನ್ ರಾಮನಗರ, ಜೊತೆ ಕಾರ್ಯದರ್ಶಿಗಳಾಗಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು, ಸತೀಶ್ ಸಂಪಾಜೆ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ಕುಲಾಲ್ ಬಂಟ್ವಾಳ, ಸೇವಾ ದಳಪತಿಯಾಗಿ ಜಯಂತ್ ಕುಲಾಲ್ ಅಗ್ರಬೈಲ್, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಶಾ ಗಿರಿಧರ್ ಪಾಪಿನಕೋಡಿ ಇವರು ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.