×
Ad

ಗಾಂಜಾ ಸೇವನೆ ಆರೋಪ: ಯುವಕ ಸೆರೆ

Update: 2025-06-12 22:26 IST

ಮಂಗಳೂರು: ಕಾವೂರು ಗಾಂಧಿನಗರ ಜಂಕ್ಷನ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಆರೋಪದಲ್ಲಿ ಕಾವೂರು ಗಾಂಧಿನಗರ ನಿವಾಸಿ ತ್ರಿಶೂಲ್ ತೇಜಶ್ವಿ ಕೆ.ಪಿ. (26) ಎಂಬಾತನನ್ನು ಬಂಧಿಸಲಾಗಿದೆ.

ಜೂ.11ರಂದು ಗಸ್ತಿನಲ್ಲಿದ್ದಾಗ ಆರೋಪಿಯು ಗಾಂಧಿನಗರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದಿದ್ದು, ಆತನನ್ನು ವಶಕ್ಕೆ ಪಡೆದು ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಕಾವೂರು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News