×
Ad

ಜಾಲ್ಸೂರು ಗ್ರಾಮದಲ್ಲಿ ಕಾಡಾನೆ ದಾಳಿ; ಕೃಷಿ ನಾಶ

Update: 2025-06-29 21:04 IST

ಸುಳ್ಯ: ಜಾಲ್ಸೂರು ಗ್ರಾಮದ ಕೆಮನಬಳ್ಳಿ ಮುರಳೀಧರರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಪ್ರಮಾಣದಲ್ಲಿ ಅಡಕೆ, ತೆಂಗು, ಬಾಳೆ ಕೃಷಿಯನ್ನು ನಾಶ ಪಡಿಸಿದೆ.

ಕಾಡಾನೆ ಕಳೆದ ಮೂರು ದಿನಗಳಿಂದ ಸತತವಾಗಿ ರಾತ್ರಿ ವೇಳೆ ದಾಳಿ ನಡೆಸುತ್ತಿದ್ದು, ಅಪಾರ ಕೃಷಿಯನ್ನು ನಾಶಪಡಿಸಿದೆ. ಮೂರು ದಿನಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಅಡಕೆ ಮರಗಳು, ತೆಂಗು ಹಾಗೂ ಬಾಳೆ ಗಿಡಗಳನ್ನು ಪುಡಿಗೈದು ಹಾನಿಯುಂಟು ಮಾಡಿದೆ. ಕಳೆದ ಕೆಲವು ತಿಂಗಳುಗಳಿಂದ ಜಾಲ್ಸೂರು ಮತ್ತು ಕನಕಮಜಲು ಗ್ರಾಮದ ಪರಿಸರದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಕೂಡಲೇ ಗಮನ ಹರಿಸಿ ಕೃಷಿ ಹಾನಿಯನ್ನು ತಪ್ಪಿಸಬೇಕೆಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News