ಮಾದಕ ದ್ರವ್ಯ ಸೇವನೆ ಪ್ರಕರಣ: ಮೂವರು ಆರೋಪಿಗಳ ಬಂಧನ
Update: 2025-07-01 21:07 IST
ಮಂಗಳೂರು ಜು.1: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧೆಡೆ ಮಾದಕ ಸೇವನೆ ಮಾಡಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಅಡ್ಯಾರ್ ಕಟ್ಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಲ್ಲಿ ಅಬ್ದುಲ್ ಅಕ್ರಮ್ (35) ಮತ್ತು ಅಡ್ಯಾರ್ ಪದವು ಅಂಬೇಡ್ಕರ್ ಭವನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಲ್ಲಿ ಪರಂಗಿಪೇಟೆ ಪುದು ನಿವಾಸಿ ಸುಜಯ (26), ಅಡ್ಯಾರ್ಪದವಿನ ಅನುಕುಮಾರ (27) ಎಂಬವರನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.