×
Ad

ನಾಟಕದ ಮೂಲಕ ಸೌಹಾರ್ದದ ಪರಂಪರೆ ಬೆಸೆಯೋಣ : ಪುಂಡರೀಕಾಕ್ಷ

Update: 2025-07-18 19:49 IST

ಮಂಗಳೂರು: ತುಳುನಾಡಿನ ಗತಕಾಲದ ಸೌಹಾರ್ದದ ಬದುಕು ಹಾಗೂ ಕಥನಗಳು ಎಲ್ಲರಿಗೂ ಗೊತ್ತಿವೆ. ಆದರೆ ಮುಂದಿನ ಪೀಳಿಗೆಗೆ ಸೌಹಾರ್ದತೆಯನ್ನು ಸಾರುವ ಕಾರ್ಯವಾಗಬೇಕಿದೆ. ಈ ನಿಟ್ಟಿನಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ರೂಪಕಗಳು ಹೆಚ್ಚು ಪರಿಣಾಮಕಾರಿಯಾಗಲಿದೆ. ಹಾಗಾಗಿ ನಾಟಕದ ಮೂಲಕ ಸೌಹಾರ್ದದ ಪರಂಪರೆ ಬೆಸೆಯೋಣ ಎಂದು ಜಿಎಸ್ಟಿ-ಆದಾಯ ತೆರಿಗೆ ಸಲಹೆಗಾರ ಯು.ಪುಂಡರೀಕಾಕ್ಷ ಮೂಲ್ಯ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ನಿರ್ಮಿಸಿದ ಪಡೀಲ್ ಅಮೃತ ಕಾಲೇಜ್ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ’ಪಗಪು’ ತುಳು ನಾಟಕದ ಪ್ರಥಮ ಪ್ರದರ್ಶನವನ್ನು ಬಲ್ಮಠ ಸರಕಾರಿ ಪಿಯು ಕಾಲೇಜಿನಲ್ಲಿ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಾತಿ, ಮತ, ಭೇದವನ್ನು ಮರೆತು ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ತುಳು ಭಾಷೆಗೆ ಇದೆ. ತುಳುವಿನ ಮೂಲಕ ನಾವೆಲ್ಲರೂ ಒಗ್ಗಟ್ಟನ್ನು ಮತ್ತು ಬಾಂಧವ್ಯವನ್ನು ಬೆಸೆಯೋಣ ಎಂದು ಪುಂಡರೀಕಾಕ್ಷ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಇಂಟ್ಯಾಕ್ ಮಂಗಳೂರು ಘಟಕದ ಸಂಚಾಲಕ ಸುಭಾಶ್ ಬಸು, ಅಮೃತ ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರಹಾಸ ಕಣ್ವತೀರ್ಥ, ಬಲ್ಮಠ ಸರಕಾರಿ ಪಿಯು ಹೆಣ್ಮಕ್ಕಳ ಕಾಲೇಜಿನ ಪ್ರಾಂಶುಪಾಲೆ ವನಿತಾ ದೇವಾಡಿಗ ಮಾತನಾಡಿದರು.

ನಾಟಕದ ನಿರ್ದೇಶಕ ಜಗನ್ ಪವಾರ್ ಬೇಕಲ್ ಸ್ವಾಗತಿಸಿದರು. ಅಕಾಡಮಿ ಸದಸ್ಯ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News