×
Ad

ಸುರತ್ಕಲ್: ಹೃದಯಾಘಾತದಿಂದ ಯುವಕ ಮೃತ್ಯು

Update: 2025-07-19 19:25 IST

ಸುರತ್ಕಲ್: ಹೃದಯಾಘಾತಕ್ಕೀಡಾಗಿ ಯುವಕನೋರ್ವ ಮೃತಪಟ್ಟ ಘಟನೆ ಕೃಷ್ಣಾಪುರ 6ಬ್ಲಾಕ್‌ ನಲ್ಲಿ ಶುಕ್ರವಾರ ರಾತ್ರಿ ವರದಿಯಾಗಿದೆ.

ಕೃಷ್ಣಾಪುರ 6ನೇ ಬ್ಲಾಕ್‌ ನಿವಾಸಿ ಮುಹಮ್ಮದ್‌ ಯೂನಸ್‌ ಮೃತ ಯುವಕ ಎಂದು ತಿಳಿದು ಬಂದಿದೆ.

ಇವರು ಸೌದಿ ಅರೆಬಿಯಾದ ಅಲ್‌ ಕೋಬರ್‌ ನಲ್ಲಿ ಕೆಲಸದಲ್ಲಿದ್ದು, 15 ದಿನಗಳ ರಜೆ ಪಡೆದು ಊರಿಗೆ ಬಂದಿದ್ದರು ಎನ್ನಲಾಗಿದೆ. ಶುಕ್ರವಾರ ರಾತ್ರಿ 11:30 ಸುಮಾರಿಗೆ ಮನೆಯಲ್ಲಿ ಊಟ ಮಾಡಿ ಮನೆ ಮಂದಿಯೊಂದಿಗೆ ಕುಳಿತು ಮಾತನಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಮೃತ ಮುಹಮ್ಮದ್‌ ಯೂನಸ್‌ ಅವರು ಪತ್ನಿ, ಒಂದು ವರ್ಷದ ಮಗು, ತಂದೆ, ತಾಯಿ ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News