×
Ad

ಪಡುಬಿದ್ರಿ: ಟ್ಯಾಂಕರ್ ಢಿಕ್ಕಿ; ದ್ವಿಚಕ್ರ ವಾಹನ ಸಹ ಸವಾರ ಮೃತ್ಯು

Update: 2023-08-28 22:04 IST

ಪಡುಬಿದ್ರಿ: ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸಹ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕನ್ನಂಗಾರ್ ಬೈಪಾಸ್ ಬಳಿ ಸೋಮವಾರ ನಡೆದಿದೆ.

ಮೃತರನ್ನು ಜಾರ್ಖಂಡ್‍ನ ಸದ್ದಾಂ ಹನ್ಸಾರಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಯತ್ತ ಸಾಗುತ್ತಿದ್ದ ಟ್ಯಾಂಕರ್ ಕನ್ನಂಗಾರ್ ಬೈಪಾಸ್ ಬಳಿ ತೀರ ಎಡಬದಿಗೆ ಚಲಿಸಿದ ಪರಿಣಾಮ ಸ್ಕೂಟರ್‍ಗೆ ಡಿಕ್ಕಿಯಾಗಿದೆ.

ಅಪಘಾತದಿಂದ ಸ್ಕೂಟರ್ ಸವಾರ ಪಕ್ಕಕ್ಕೆ ಹಾರಿ ಅಪಾಯದಿಂದ ಪಾರಾದರೆ, ಸಹ ಸವಾರ ರಸ್ತಗೆ ಬಿದ್ದಿದ್ದು, ಅವರ ಮೇಲೆ ಟ್ಯಾಂಕರ್ ಚಕ್ರ ಚಲಿಸಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಪಡುಬಿದ್ರಿ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News