×
Ad

ಪಣಂಬೂರು: ಯುವಕನಿಗೆ ತಂಡದಿಂದ ಚೂರಿ ಇರಿತ; ಪ್ರಕರಣ ದಾಖಲು

Update: 2023-10-17 22:07 IST

ಪಣಂಬೂರು: ಮೆಡಿಕಲ್‌ ಶಾಪ್ ಗೆ ತೆರಳುತ್ತಿದ್ದ ಯುವಕನೋರ್ವನಿಗೆ ಮೂವರು ಯುವಕರ ತಂಡವೊಂದು ಚೂರಿ ಇರಿದು ಪರಾರಿಯಾಗಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ.

ಬೆಂಗ್ರೆ ನಿವಾಸಿ ಮುಹಮ್ಮದ್‌ ಅಕ್ರಂ ಚೂರಿ ಇರಿತಕ್ಕೊಳಗಾದ ಯುವಕನಾಗಿದ್ದು, ಅದೇ ಪರಿಸರದವರೆನ್ನಲಾದ ಸಮದ್, ಇಜಾಝ್ ಮತ್ತು ಇರ್ಫಾನ್ ಹಲ್ಲೆಗೈದ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಮುಹಮ್ಮದ್‌ ಅಕ್ರಂ ಅವರನ್ನು ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯ ವಿವರ: ಮುಹಮ್ಮದ್‌ ಅಕೀಂ ಅವರು ಬೇಂಗ್ರೆ ಸೂಪರ್ ಸ್ಟಾರ್ ಮೈದಾನದ ಬಸ್ ಸ್ಟ್ಯಾಂಡ್ ಬಳಿಯಿಂದಾಗಿ ಪರೋಟ ಪಾಯಿಂಟ್ ಸಮೀಪದ ಮೆಡಿಕಲ್ ಶಾಪ್ ಗೆ ಹೋಗುತ್ತಿದ್ದ ವೇಳೆ ಆರೋಪಿಗಳಾದ ಸಮದ್, ಇಜಾಝ್ ಮತ್ತು ಇರ್ಫಾನ್ ಎಂಬವರು ಏಕಾಏಕಿ ಅಡ್ಡಗಟ್ಟಿ ಚೂರಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಕ್ರಂ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News