×
Ad

ಪೆರ್ನೆ: ಬಸ್ ಢಿಕ್ಕಿ; ಲಾರಿ ಚಾಲಕ ಮೃತ್ಯು

Update: 2024-08-17 22:14 IST

ಉಪ್ಪಿನಂಗಡಿ: ಪೆರ್ನೆ ಗ್ರಾಮದ ಅಮೈ ಎಂಬಲ್ಲಿ ಖಾಸಗಿ ಬಸ್ ಮತ್ತು ತರಕಾರಿ ಸಾಗಾಟದ ಮಿನಿ ಲಾರಿ ನಡುವೆ ಢಿಕ್ಕಿ ಸಂಭವಿಸಿ ಲಾರಿ ಚಾಲಕ ಅರ್ಜುನ್ ಸಿಂಗ್ (32) ಎಂಬವರು ಸಾವನ್ನಪ್ಪಿ, ಬಸ್ಸಿನಲ್ಲಿದ ಮೂವರು ಗಾಯಗೊಂಡ ಘಟನೆ ಶನಿವಾರ ನಸುಕಿನ ಜಾವ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್‌ ಎದುರುಗಡೆಯಿಂದ ಬಂದ ಮಿನಿ ಲಾರಿ ಢಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಚಾಲಕ ಅರ್ಜುನ್ ಸಿಂಗ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲ್ಪಟ್ಟರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಘಟನೆಯಿಂದ ಬಸ್ಸಿನ ಚಾಲಕ ಪಾಶ್ರ್ವನಾಥ್, ಪ್ರಯಾಣಿಕರಾದ ಪವನ್ ಕುಮಾರ್ (40) ಬ್ರಾಹ್ಮಿ (10) ಎಂಬವರು ಗಾಯಗೊಂಡು ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News