ಶಿರಾಡಿ ಘಾಟ್: ಟ್ಯಾಂಕರ್ ಪಲ್ಟಿ
Update: 2025-07-28 22:02 IST
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಶಿರಾಡಿ ಘಾಟ್ ಪರಿಸರದಲ್ಲಿ ಟ್ಯಾಂಕರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಸೋಮವಾರ ಸಂಭವಿಸಿದೆ.
ಶಿರಾಡಿ ಗಡಿ ದೇವಸ್ಥಾನದ ಮೇಲ್ಭಾಗದ ಪರಿಸರದಲ್ಲಿ ಈ ಘಟನೆ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಟ್ಯಾಂಕರ್ ಗುಂಡ್ಯ ಹೊಳೆಗೆ ಬೀಳುವ ಸಾಧ್ಯತೆ ಇತ್ತಾದರೂ ಹೆದ್ದಾರಿ ಬದಿಯ ಮರಗಳು ತಡೆದಂತಿತ್ತು. ಘಟನಾ ಸ್ಥಳಕ್ಕೆ ಸಕಲೇಶಪುರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.