×
Ad

ಪ್ರಕರಣಗಳ ರಾಜೀ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ: ನ್ಯಾಯಾಧೀಶೆ ಜೈಬುನ್ನಿಸಾ

Update: 2026-01-20 22:36 IST

ಮಂಗಳೂರು,ಜ.20:ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಎಂಬ 90 ದಿನಗಳ 2ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಈಗಾಗಲೆ ಆರಂಭಗೊಂಡಿದೆ.

ಹಾಗಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿಆರ್‌ಟಿ ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಮತ್ತಿತರ ಸಿವಿಲ್ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಸೂಚಿಸಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ದ.ಕ. ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಲ್ಲಿ ನುರಿತ ಸಂಧಾನಕಾರರು ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸುತ್ತಾರೆ. ಪ್ರಕರಣಗಳು ಹೈಕೋರ್ಟ್‌ ನಲ್ಲಿ ಬಾಕಿ ಇದ್ದಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಆವರಣಗಳಲ್ಲಿರುವ ಹೈಕೋರ್ಟ್ ಮಧ್ಯಸ್ಥಿಕಾ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.ಉಚಿತ ಕಾನೂನು ಸಲಹೆಗಾಗಿ 15100 ಸಂಖ್ಯೆಗೆ ಕರೆ ಮಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News