ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ದದ ಪ್ರತಿಭಟನೆಯಲ್ಲಿ ಭಾಗವಹಿಸಲು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಕರೆ
Update: 2025-04-16 10:25 IST
ಇಸ್ಮಾಯಿಲ್ ಪಡ್ಪಿನಂಗಡಿ
ಸುಳ್ಯ : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ದ ಎ.18 ರಂದು ಅಡ್ಯಾರ್ ನಲ್ಲಿ ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ನೇತೃತ್ವದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಬೆಂಬಲ ಘೋಷಿಸಿದೆ.
ಪ್ರತಿಭಟನೆಯಲ್ಲಿ ತಾವೆಲ್ಲರೂ ಹೆಚ್ಚಿನ ಸಂಖೆಯಲ್ಲಿ ಬಾಗವಹಿಸುವಂತೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ ಪತ್ರಿಕಾ ಪ್ರಕಟನೆ ಮೂಲಕ ಮನವಿ ಮಾಡಿದ್ದಾರೆ.