×
Ad

ತೊಕ್ಕೊಟ್ಟು | ಹಾಡುಗಳ ಮೂಲಕ ತುಳು ಅಭಿರುಚಿ ಮೂಡಿಸಲು ಸಾಧ್ಯ: ಭಾಸ್ಕರ್ ತೊಕ್ಕೊಟ್ಟು

Update: 2025-12-05 16:53 IST

ತೊಕ್ಕೊಟ್ಟು, ಡಿ.5: ತುಳು ಭಾಷಾ ಕಲಿಕೆ ಮತ್ತು ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡಮಿ ಹಮ್ಮಿಕೊಂಡಿರುವ ಡೆನ್ನ ಡೆನ್ನಾನ-ಪದ ಪನ್ಕನ ಅಭಿಯಾನವು ಮಹತ್ವಪೂರ್ಣವಾಗಿದೆ ಎಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತರರಾಷ್ಟ್ರೀಯ ದೇಹಧಾರ್ಡ್ಯ ಪಟು ಭಾಸ್ಕರ ತೊಕ್ಕೊಟ್ಟು ಅಭಿಪ್ರಾಯಪಟ್ಟರು.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ಸರಕಾರಿ ಪ್ರೌಢಶಾಲೆ ಬಬ್ಬುಕಟ್ಟೆಯ ಇದರ ಜಂಟಿ ಆಶ್ರಯದಲ್ಲಿ ಬಬ್ಬುಕಟ್ಟೆ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ನಡೆದ ತುಳು ಹಾಡುಗಳ ಕಲಿಕಾ ಕಾರ್ಯಾಗಾರ ಮತ್ತು ಹಾಡುಗಳ ಪ್ರಸ್ತುತಿಡೆನ್ನ ಡೆನ್ನಾನ - ಪದ ಪನ್ಕನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತುಳು ಅಕಾಡಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಮಾಜಿಕ ಕಾರ್ಯಕರ್ತೆ ಸುಹಾಸಿನಿ ಬಬ್ಬುಕಟ್ಟೆ, ಉಳ್ಳಾಲ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ, ಬಬ್ಬುಕಟ್ಟೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಖೈರುನ್ನೀಸಾ, ಅಕಾಡಮಿಯ ಸದಸ್ಯ ಬೂಬ ಪೂಜಾರಿ ಮಳಲಿ, ಸಂಗೀತ ನಿರ್ದೇಶಕ ತೋನ್ಸೆ ಪುಷ್ಕಳ್ ಕುಮಾರ್, ಗಾಯಕಿ ವಾಣಿ ಸಪ್ರೆ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಸವಿತಾ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ದುರ್ಗಲತಾ ವಂದಿಸಿದರು. ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News