ಮಂಗಳೂರು: ಮನಪಾ ಆಯುಕ್ತ ಸಿ.ಎಲ್. ಆನಂದ ವರ್ಗಾವಣೆ
Update: 2025-01-18 22:28 IST
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಸಿ.ಎಲ್. ಆನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು ನೇಮಕಗೊಳಿಸಿದೆ.