×
Ad

ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2025-08-04 21:58 IST

ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಹಾಸನದ ಬಿಟ್ಟಗೌಡನಹಳ್ಳಿ ಎಂಬಲ್ಲಿ ಬಂಧಿಸಿದ್ದಾರೆ.

ಹಾಸನ ಮೂಲದ, ಮಂಗಳೂರಿನ ತಲಪಾಡಿ ಎಂಬಲ್ಲಿ ವಾಸವಿದ್ದ ಅಕ್ಬರ್ ಸೊಹೈಬ್ (24) ಬಂಧಿತ ಆರೋಪಿ. ಈತ 5 ವರ್ಷದಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2, ಬಂಟ್ವಾಳ ನಗರ ಠಾಣೆಯಲ್ಲಿ 1, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಲ್ಕು ಹಾಗೂ ಕೇರಳದ ಕನಪ್ಪುರಂ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿ ವಾರಂಟ್ ಜಾರಿಯಾಗಿತ್ತು. ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕನಾಗಿದ್ದ ಕೌಶಿಕ್ ಅವರ ನೇತೃತ್ವದಲ್ಲಿ ಈತನನ್ನು ಬಂಧಿಸಿದ ತಂಡದಲ್ಲಿ ಸಿಬ್ಬಂದಿ ಶಿವರಾಮ ರೈ, ಶ್ರೀಶೈಲ ಎಂ.ಕೆ., ಮೊಹಮ್ಮದ್ ಮೌಲನಾ ಎಂಬವರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News