×
Ad

ವಿಜಯಪುರ – ಮಂಗಳೂರು ಸೆಂಟ್ರಲ್ ರೈಲು ಸಂಚಾರ ಖಾಯಂ

Update: 2025-08-12 22:37 IST

ಮಂಗಳೂರು: ನೈರುತ್ಯ ರೈಲ್ವೆ ವಲಯವು ರೈಲು ಸಂಖ್ಯೆ 07377/78 ವಿಜಯಪುರ –ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಖಾಯಂಗೊಳಿಸಿ ಓಡಿಸುವ ಬಗ್ಗೆ ಅಧಿಕೃತವಾಗಿ ಪ್ರಕಟನೆಯನ್ನು ಹೊರಡಿಸಿದೆ.

ಇದರ ಅನ್ವಯ ವಿಜಯಪುರದಿಂದ ಸೆಪ್ಟೆಂಬರ್ 1 ಹಾಗೂ ಮಂಗಳೂರು ಸೆಂಟ್ರಲಿನಿಂದ ಸೆಪ್ಟೆಂಬರ್ 2ರಿಂದ ಈ ರೈಲು ಖಾಯಂ ರೈಲಾಗಿ ಓಡಲಿದೆ.

ಈ ರೈಲನ್ನು ಖಾಯಂಗೊಳಿಸಲು ಪ್ರಯಾಣಿಕರ ಸಂಘಗಳ ನಿರಂತರ ಹೋರಾಟ,ನಾಗರಿಕರು ಹಾಗೂ ವಿವಿಧ ಸಂಘಟನೆಗಳಿಂದ ನಿರಂತರ ಬೆಂಬಲ ಮತ್ತು ಸತತ ಪ್ರಯತ್ನ , ಸಂಸದರಿಂದ ದೊರೆತ ಬೆಂಬಲ, ರಾಮೇಶ್ ಜಿಗಜಿಣಗಿ ಅವರ ವಿಶೇಷ ಪ್ರಯತ್ನವಿದೆ.

ಈ ನಿರ್ಧಾರದಿಂದ ಸುಬ್ರಹ್ಮಣ್ಯ, ಧರ್ಮಸ್ಥಳ, ಬಂತ್ವಾಳ, ಪುತ್ತೂರು ಹಾಗೂ ಇತರ ನಗರಗಳಿಂದ ಹಾಸನ, ಹುಬ್ಬಳ್ಳಿ, ಗದಗ, ವಿಜಯಪುರ ಹಾಗೂ ಇನ್ನಿತರೆ ಕಡೆಗಳಿಗೆ ಹೋಗುವ ಭಕ್ತರು, ವಿದ್ಯಾರ್ಥಿಗಳು ಮತ್ತು ಇತರೇ ಪ್ರಯಾಣಿಕರಿಗೆ ಬಹಳಷ್ಟು ಪ್ರಯೋಜನವಾಗಲಿದೆ ಎಂದು ರೈಲು ಬಳಕೆದಾರರು ಸಂತಸ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News