×
Ad

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ | ಉತ್ತರ ಪ್ರದೇಶ ಸರ್ಕಾರದ ಅವ್ಯವಸ್ಥೆಯೇ ಕಾರಣ: ರಾಹುಲ್ ಗಾಂಧಿ

Update: 2025-01-29 12:41 IST

ರಾಹುಲ್ ಗಾಂಧಿ

ಹೊಸದಿಲ್ಲಿ: ಮಹಾ ಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಕಳವಳ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ಸರ್ಕಾರದ ಅವ್ಯವಸ್ಥೆಯೇ ಮತ್ತು ಭಕ್ತರ ಸುರಕ್ಷತೆಗಿಂತ ವಿಐಪಿಗಳ ಸಂಚಾರದ ಮೇಲೆ ಕೇಂದ್ರೀಕರಿಸಿರುವುದು ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ.

"ಪ್ರಯಾಗರಾಜ್ ಮಹಾಕುಂಭದಲ್ಲಿ ಕಾಲ್ತುಳಿತದಿಂದ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಆಶಿಸುತ್ತೇನೆ. ಸಾಮಾನ್ಯ ಭಕ್ತರ ಬದಲು ವಿಐಪಿಗಳ ಸಂಚಾರದ ಮೇಲೆ ಸರ್ಕಾರ ವಿಶೇಷವಾಗಿ ಗಮನ ಹರಿಸಿದ್ದು ಈ ದುರಂತ ಘಟನೆಗೆ ಕಾರಣವಾಗಿದೆ" ಎಂದು ರಾಹುಲ್ ಗಾಂಧಿ ತಮ್ಮ X ಪೋಸ್ಟ್ ನಲ್ಲಿ ಹೇಳಿದ್ದಾರೆ.

ಈ ರೀತಿಯ ದುರಂತ ಘಟನೆ ಮತ್ತೆ ಸಂಭವಿಸದಂತೆ ತಡೆಯಲು ವ್ಯವಸ್ಥೆಗಳನ್ನು ಹೆಚ್ಚಿಸುವಂತೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News