×
Ad

ಪ್ರಧಾನಿ ಭೇಟಿ ವೇಳೆ ಬನಾರಸ್ ರೈಲು ನಿಲ್ದಾಣದಲ್ಲಿ ಬಿಜೆಪಿ ಶಾಸಕ ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ

Update: 2025-11-08 16:42 IST

Photo credit: indiatoday.in

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬನಾರಸ್ ರೈಲು ನಿಲ್ದಾಣಕ್ಕೆ ಭೇಟಿ ನೀಡುವ ಮುನ್ನ, ಬಿಜೆಪಿ ಶಾಸಕ ಸೌರಭ್ ಶ್ರೀವಾಸ್ತವ ಮತ್ತು ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್‌) ಸಿಬ್ಬಂದಿ ಮಧ್ಯೆ ಘರ್ಷಣೆ ನಡೆದಿದೆ. ಈ ಕುರಿತ ವೀಡಿಯೊ ವೈರಲ್ ಆಗಿದೆ.

ವರದಿಗಳ ಪ್ರಕಾರ, ಪ್ರಧಾನಿ ಆಗಮನದ ಹಿನ್ನೆಲೆ ಬನಾರಸ್ ರೈಲು ನಿಲ್ದಾಣದೊಳಗೆ ನಿರ್ಬಂಧವನ್ನು ವಿಧಿಸಲಾಗಿತ್ತು ಮತ್ತು ಬಿಗಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಸೌರಭ್ ಶ್ರೀವಾಸ್ತವ ಅವರು ಪಕ್ಷದ ಕಾರ್ಯಕರ್ತರನ್ನು ರೈಲ್ವೆ ನಿಲ್ದಾಣದೊಳಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ, ಈ ವೇಳೆ ಆರ್‌ಪಿಎಫ್‌ ಸಿಬ್ಬಂದಿ ಅವರನ್ನು ತಡೆದಿದ್ದಾರೆ ಎಂದು ಹೇಳಲಾಗಿದೆ.

ವೈರಲ್‌ ವೀಡಿಯೊದಲ್ಲಿ ಬಿಜೆಪಿ ಶಾಸಕ ಮತ್ತು ಆರ್‌ಪಿಎಫ್‌ ಸಿಬ್ಬಂದಿ ಪರಸ್ಪರ ತಳ್ಳಾಟ ನಡೆಸುತ್ತಿರುವುದು ಕಂಡು ಬಂದಿದೆ.

ಪ್ರಧಾನಿ ಮೋದಿ ಅವರು ವಾರಣಾಸಿಯಲ್ಲಿ ಬನಾರಸ್-ಖಜುರಾಹೊ ಮಾರ್ಗ ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಚಾಲನೆ ನೀಡಲು ಬನಾರಸ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News