×
Ad

ಬಾಂಬ್‌ ಬೆದರಿಕೆ: ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Update: 2024-08-22 11:09 IST

ಸಾಂದರ್ಭಿಕ ಚಿತ್ರ (PTI)

ತಿರುವನಂತಪುರಂ: ಮುಂಬೈನಿಂದ ಬಂದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ವಿಮಾನ ಬೆಳಿಗ್ಗೆ 8 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಪ್ರಯಾಣಿಕರನ್ನು ಇಳಿಸಿದ ನಂತರ ಶಿಷ್ಟಾಚಾರದಂತೆ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಒಯ್ಯಲಾಗಿದೆ.

ವಿಮಾನವು ತಿರುವನಂತಪುರ ವಿಮಾನ ನಿಲ್ದಾಣ ಸಮೀಪಿಸುತ್ತಿದ್ದಂತೆ ಬಾಂಬ್‌ ಬೆದರಿಕೆ ಇರುವ ಬಗ್ಗೆ ಪೈಲಟ್‌ ಮಾಹಿತಿ ನೀಡಿದ್ದಾರೆ. ಬಾಂಬ್‌ ಬೆದರಿಕೆ ಬಂದ ಮೂಲದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.

"ಯಾವುದೇ ಅಪಾಯಕಾರಿ ವಸ್ತುಗಳು ಕಂಡು ಬಂದಿಲ್ಲ. ವಿಮಾನ ನಿಲ್ದಾಣದ ಕಾರ್ಯಾಚರಣೆಗಳಿಗೆ ಯಾವುದೇ ಅಡೆತಡೆಯಾಗಿಲ್ಲ," ಎಂದು ಮೂಲಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿವೆ.

ಬಾಂಬ್‌ ಬೆದರಿಕೆಯ ಮೂಲವನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News