ಪರಿಶಿಷ್ಟ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್ಶಿಪ್ ಯೋಜನೆಯ ರದ್ದತಿ ಇಲ್ಲ: ಕೇಂದ್ರ ಸರಕಾರ
Update: 2025-07-22 21:45 IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ,: ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿನ ಮೆಟ್ರಿಕ್ ನಂತರದ ಶಿಷ್ಯವೇತನ (ಸ್ಕಾಲರ್ಶಿಪ್) ಯೋಜನೆಯನ್ನು ನಿಲ್ಲಿಸುವ ಯಾವುದೇ ಪ್ರಸ್ತಾವನೆ ತನ್ನ ಮುಂದಿಲ್ಲವೆಂದು ಕೇಂದ್ರ ಸರಕಾರ ಮಂಗಳವಾರ ತಿಳಿಸಿದೆ. 2025-26ರ ಶೈಕ್ಷಣಿಕ ವರ್ಷದ ಆನಂತರ ಈ ಯೋಜನೆಯು ಸ್ಥಗಿತಗೊಳ್ಳುವ ಸಾಧ್ಯತೆಯ ಬಗ್ಗೆ ಕಳವಳಗಳು ವ್ಯಕ್ತವಾಗಿದ್ದವು.
ಈ ಬಗ್ಗೆ ಮಂಗಳವಾರ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆಯ ಸಹಾಯಕ ಸಚಿವ ರಾಮದಾಸ್ ಅಠವಳೆ ಅವರು, ಉನ್ನತ ಶಿಕ್ಷಣದಲ್ಲಿ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳ ಒಟ್ಟು ದಾಖಲಾತಿ ಅನುಪಾತವನ್ನು ಹೆಚ್ಚಿಸುವುದೇ ಈ ವಿದ್ಯಾರ್ಥಿವೇತನ ಯೋಜನೆಯ ಉದ್ದೇಶವಾಗಿದೆ. ಆದುದರಿಂದ ಅದನ್ನು ನಿಲ್ಲಿಸುವ ಯಾವುದೇ ಯೋಚನೆ ಸರಕಾರಕ್ಕಿಲ್ಲವೆಂದು ಹೇಳಿದರು.