×
Ad

ಸುಪ್ರೀಂ ಕೋರ್ಟ್ ಕಾನೂನು ರೂಪಿಸುವುದಾದರೆ ಸಂಸತ್ ಭವನವನ್ನು ಮುಚ್ಚಿ : ಬಿಜೆಪಿ ಸಂಸದ ನಿಶಿಕಾಂತ್ ದುಬೆ

Update: 2025-04-19 18:19 IST

ಬಿಜೆಪಿ ಸಂಸದ ನಿಶಿಕಾಂತ್ ದುಬೆ | PC : Sansad TV

ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಕಾನೂನು ರೂಪಿಸುವುದಾದರೆ ಸಂಸತ್ ಭವನವನ್ನು ಮುಚ್ಚಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.

ಈ ಕುರಿತು ಎಕ್ಸ್ನಲ್ಲಿ ಹಿಂದಿಯಲ್ಲಿ ಸಂಸದ ನಿಶಿಕಾಂತ್ ದುಬೆ ಪೋಸ್ಟ್ ಮಾಡಿದ್ದಾರೆ.

ವಕ್ಫ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿರುವ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್ ಅಂಗಳದಲ್ಲಿರುವಾಗ ಜಾರ್ಖಂಡ್ನ ಗೊಡ್ಡಾದ ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ಈ ಹೇಳಿಕೆ ಹೊರಬಿದ್ದಿದೆ.

ಇತ್ತೀಚಿಗೆ ರಾಜ್ಯ ವಿಧಾನಸಭೆ ಅಥವಾ ಸಂಸತ್ತು ಆಂಗೀಕರಿಸಿದ ಮಸೂದೆಗಳಿಗೆ ಉತ್ತರಿಸಲು ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳಿಗೆ ಸುಪ್ರೀಂ ಕೋರ್ಟ್ ಕಾಲಮಿತಿ ನಿಗದಿಪಡಿಸಿತ್ತು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News