×
Ad

ಇಂಡೋನೇಶ್ಯ ಕರಾವಳಿಗೆ ಅಪ್ಪಳಿಸಿದ ‘ಸೆನ್ಯಾರ್’ ಚಂಡಮಾರುತ

ಬಂಗಾಳ ಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ

Update: 2025-11-26 20:55 IST

ಸಾಂದರ್ಭಿಕ ಚಿತ್ರ | Photo Credit : PTI  

ಹೊಸದಿಲ್ಲಿ, ನ. 26: ಮಲಕ್ಕ ಜಲಸಂಧಿಯಲ್ಲಿ ರೂಪುಗೊಂಡಿರುವ ತೀವ್ರ ವಾಯುಭಾರ ಕುಸಿತವು ಬುಧವಾರ ‘ಸೆನ್ಯಾರ್’ ಚಂಡಮಾರುತವಾಗಿ ಪರಿವರ್ತನೆಗೊಂಡು ಇಂಡೋನೇಶ್ಯ ಕರಾವಳಿಗೆ ಅಪ್ಪಳಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತದ ಪ್ರಭಾವ ಮುಂದಿನ 24 ಗಂಟೆಗಳವರೆಗೆ ಇರುತ್ತದೆ.

ಈ ನಡುವೆ, ಬಂಗಾಳ ಕೊಲ್ಲಿ ಮತ್ತು ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಶ್ರೀಲಂಕಾ ಜಲಪ್ರದೇಶದಲ್ಲಿ ಇನ್ನೊಂದು ಕಡಿಮೆ ಒತ್ತಡ ಪ್ರದೇಶ ರೂಪುಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದು ತೀವ್ರಗೊಂಡು ವಾಯುಭಾರ ಕುಸಿತವಾಗಿ ಪರಿಣಮಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಈ ಎರಡೂ ಹವಾಮಾನ ವೈಪರೀತ್ಯಗಳಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ, ಕೇರಳ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹೊರಡಿಸಲಾಗಿದೆ. ಈ ಸ್ಥಳಗಳಲ್ಲಿ ಬುಧವಾರ ಮತ್ತು ಗುರುವಾರ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News