×
Ad

ಚುನಾವಣಾ ವೆಚ್ಚಕ್ಕಾಗಿ ನಿಧಿ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಿದ ದಿಲ್ಲಿ ಸಿಎಂ ಆತಿಶಿ

Update: 2025-01-12 16:10 IST

ದಿಲ್ಲಿ ಸಿಎಂ ಆತಿಶಿ | PC :PTI 

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಮತ್ತು ಕಲ್ಕಾಜಿ ಕ್ಷೇತ್ರದ ಎಎಪಿ ಅಭ್ಯರ್ಥಿ ಆತಿಶಿ ರವಿವಾರ ಜನರಿಂದ ದೇಣಿಗೆಯನ್ನು ಸಂಗ್ರಹಿಸುವ ನಿಧಿ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಿದ್ದು, ಜನರು ತಮ್ಮ ಪಕ್ಷದ ಕೆಲಸ ಮತ್ತು ಪ್ರಾಮಾಣಿಕತೆಯನ್ನು ಬೆಂಬಲಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆತಿಶಿ, ಜನರು ಹಣವನ್ನು ದೇಣಿಗೆ ನೀಡಲು ಆನ್ ಲೈನ್ ಲಿಂಕ್ ಅನ್ನು ಬಿಡುಗಡೆ ಮಾಡಿದ್ದಾರೆ. ಚುನಾವಣೆಗಾಗಿ ಸ್ಪರ್ಧಿಸಲು 40 ಲಕ್ಷ ರೂ. ಬೇಕು. ಎಎಪಿ ಯಾವಾಗಲೂ ಸಾಮಾನ್ಯ ಜನರ ಸಣ್ಣ ದೇಣಿಗೆಯ ಸಹಾಯದಿಂದ ಚುನಾವಣೆಗಳನ್ನು ಎದುರಿಸುತ್ತಿದೆ. ಇದು ಕೆಲಸ ಮತ್ತು ಪ್ರಾಮಾಣಿಕತೆಯ ರಾಜಕೀಯವನ್ನು ಮುಂದುವರಿಸಲು ಸಹಾಯ ಮಾಡುತ್ತದೆ. ಕಳೆದ 5 ವರ್ಷಗಳಲ್ಲಿ ಶಾಸಕರಾಗಿ, ಸಚಿವರಾಗಿ ಮತ್ತು ಈಗ ದಿಲ್ಲಿಯ ಮುಖ್ಯಮಂತ್ರಿಯಾಗಿ ನನ್ನ ಬೆಂಬಲಕ್ಕೆ ನಿಂತಿದ್ದೀರಿ. ನಿಮ್ಮ ಆಶೀರ್ವಾದ ಮತ್ತು ಬೆಂಬಲವಿಲ್ಲದೆ ಇದೆಲ್ಲವೂ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಜನರ ಸಣ್ಣ ದೇಣಿಗೆಗಳು ರಾಜಕೀಯದಲ್ಲಿ ಪಕ್ಷದ ಪ್ರಾಮಾಣಿಕ ವಿಧಾನವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ, ಕಾರ್ಪೊರೇಟ್ ದೇಣಿಗೆಗಳನ್ನು ಅವಲಂಬಿಸಿರುವ ಮತ್ತು ವ್ಯಾಪಾರದ ಹಿತಾಸಕ್ತಿಗಳನ್ನು ಹೊಂದಿರುವ ಇತರ ಪಕ್ಷಗಳಿಗಿಂತ ನಾವು ಭಿನ್ನವಾಗಿದ್ದೇವೆ ಎಂದು ಆತಿಶಿ ಹೇಳಿದ್ದಾರೆ.

ಯುವ, ವಿದ್ಯಾವಂತ ಮಹಿಳೆಯಾಗಿ, ನಿಮ್ಮ ನಂಬಿಕೆ ಮತ್ತು ದೇಣಿಗೆಗಳು ನನಗೆ ರಾಜಕೀಯ ಜೀವನವನ್ನು ಕಲ್ಪಿಸಲು ಅನುವು ಮಾಡಿಕೊಟ್ಟಿವೆ. ನಾನು ಒಬ್ಬಂಟಿಯಾಗಿ ನಡೆಯಲು ಸಾಧ್ಯವಿಲ್ಲ. ಈಗ ನಾವು ಮತ್ತೊಂದು ಚುನಾವಣಾ ಪ್ರಚಾರವನ್ನು ಎದುರಿಸುತ್ತಿರುವಾಗ, ನನಗೆ ಮತ್ತೊಮ್ಮೆ ನಿಮ್ಮ ಬೆಂಬಲ ಬೇಕು ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News