×
Ad

ಗೃಹ ಖರೀದಿದಾರರಿಗೆ ವಂಚನೆ ಪ್ರಕರಣ | ಗೌತಮ್ ಗಂಭೀರ್ ಖುಲಾಸೆ ಆದೇಶಕ್ಕೆ ದಿಲ್ಲಿ ಹೈಕೋರ್ಟ್ ತಡೆಯಾಜ್ಞೆ

Update: 2024-11-18 22:35 IST

 ದಿಲ್ಲಿ ಹೈಕೋರ್ಟ್ | PC : PTI 

ಹೊಸದಿಲ್ಲಿ : ಗೃಹ ಖರೀದಿದಾರರು ವಂಚನೆಗೆ ಒಳಗಾಗಿರುವ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಭಾರತದ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ ಹಾಗೂ ಇತರರನ್ನು ಖುಲಾಸೆಗೊಳಿಸಿರುವುದನ್ನು ತಳ್ಳಿ ಹಾಕಿದ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ದಿಲ್ಲಿ ಉಚ್ಚ ನ್ಯಾಯಾಲಯ ಸೋಮವಾರ ತಡೆಯಾಜ್ಞೆ ನೀಡಿದೆ.

ಪ್ರಕರಣದಲ್ಲಿ ತನ್ನನ್ನು ಖುಲಾಸೆಗೊಳಿಸಿ ದಂಡಾಧಿಕಾರಿಯವರ ನ್ಯಾಯಾಲಯ ನೀಡಿದ ಆದೇಶವನ್ನು ತಳ್ಳಿ ಹಾಕಿದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಗಂಭೀರ್ ಸಲ್ಲಿಸಿದ ಮನವಿಯ ಕುರಿತಂತೆ ನ್ಯಾಯಮೂರ್ತಿ ಮನೋಜ್ ಕುಮಾರ್ ಒಹ್ರಿ ಅವರು ಈ ಮಧ್ಯಂತರ ಆದೇಶ ನೀಡಿದ್ದಾರೆ ಹಾಗೂ ದಿಲ್ಲಿ ಸರಕಾರದ ಪ್ರತಿಕ್ರಿಯೆ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News