ವಯನಾಡ್: ಶಂಕಿತ ಮಾವೋವಾದಿಗಳಿಂದ ಚುನಾವಣೆ ಬಹಿಷ್ಕಾರಕ್ಕೆ ಕರೆ

Update: 2024-04-24 06:53 GMT

Photo credit: thehindu.com

ವಯನಾಡ್: ಎಪ್ರಿಲ್‌ 26 ರಂದು ಮತದಾನಕ್ಕೆ ಸಜ್ಜಾಗುತ್ತಿರುವ ಕೇರಳಕ್ಕೆ ಶಂಕಿತ ಮಾವೋವಾದಿಗಳಿಂದ ಆತಂಕ ಎದುರಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪೊಂದು ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದೆ.

ನಾಲ್ವರು ಸದಸ್ಯರ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪು ತಳಪ್ಪುಳ ಪೊಲೀಸ್ ಠಾಣೆ ಪ್ರದೇಶಕ್ಕೆ ಒಳಪಟ್ಟ ಕಂಬಮಲ ಪ್ರದೇಶಕ್ಕೆ ಬಂದು ಸ್ಥಳೀಯರಲ್ಲಿ ಚುನಾವಣೆಯನ್ನು ಬಹಿಷ್ಕರಿಸುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ.

ಮುಂಜಾನೆ 6.15ರ ಸುಮಾರಿಗೆ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪು ಪ್ರದೇಶಕ್ಕೆ ಬಂದು ಚುನಾವಣೆ ಬಹಿಷ್ಕರಿಸುವಂತೆ ಘೋಷಣೆ ಕೂಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಶಂಕಿತ ಮಾವೋವಾದಿಗಳು ಸ್ಥಳೀಯರೊಂದಿಗೆ ಮಾತನಾಡುತ್ತಿರುವ ವಿಡಿಯೊ ಕೂಡ ವೈರಲ್‌ ಆಗಿದೆ. ಘಟನೆ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News