ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 28ರಂದು ನನ್ನ ಪತಿ ನ್ಯಾಯಾಲಯದಲ್ಲಿ ಸತ್ಯ ಬಹಿರಂಗಪಡಿಸಲಿದ್ದಾರೆ: ಕೇಜ್ರಿವಾಲ್ ಪತ್ನಿ ಸುನೀತಾ

Update: 2024-03-27 09:10 GMT

ಸುನೀತಾ ಕೇಜ್ರಿವಾಲ್ | Photo: PTI

ಹೊಸದಿಲ್ಲಿ: ಜಾರಿ ನಿರ್ದೇಶನಾಲಯದ ಹಲವು ದಾಳಿಯಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ ಎಂದು ಸಂಕ್ಷಿಪ್ತವಾಗಿ ಹೇಳಿರುವ ಸುನೀತಾ ಕೇಜ್ರಿವಾಲ್, ತಮ್ಮ ಪತಿಯು ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಮಾರ್ಚ್ 28ರಂದು ನ್ಯಾಯಾಲಯದೆದುರು ಸತ್ಯ ಬಹಿರಂಗಪಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ನಡುವೆ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ, ಜಿಲ್ಲಾ ನ್ಯಾಯಾಲಯಗಳೆದುರು ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಕ್ಷದ ಕಾನೂನು ಘಟಕ ನೀಡಿರುವ ಕರೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ದಿಲ್ಲಿ ಹೈಕೋರ್ಟ್, ನ್ಯಾಯಾಲಯದ ಆವರಣದೊಳಗೆ ಪ್ರತಿಭಟನೆ ನಡೆಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಅರವಿಂದ್ ಕೇಜ್ರಿವಾಲ್ ರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News