×
Ad

ಮಹಾರಾಷ್ಟ್ರ | ಔರಂಗಾಬಾದ್ ರೈಲ್ವೆ ನಿಲ್ದಾಣವಿನ್ನು ಛತ್ರಪತಿ ಸಂಭಾಜಿನಗರ್ ರೈಲ್ವೆ ನಿಲ್ದಾಣ

ಮರುನಾಮಕರಣದ ಸರಕಾರಿ ಅಧಿಸೂಚನೆ ಪ್ರಕಟ

Update: 2025-10-18 20:09 IST

ಔರಂಗಾಬಾದ್ ರೈಲ್ವೆ ನಿಲ್ದಾಣ | Photo Credit : NDTV 

ಮುಂಬೈ: ಮಹಾರಾಷ್ಟ್ರ ಸರಕಾರ ಔರಂಗಾಬಾದ್ ರೈಲ್ವೆ ನಿಲ್ದಾಣಕ್ಕೆ ಛತ್ರಪತಿ ಸಂಭಾಜಿನಗರ್ ರೈಲ್ವೆ ನಿಲ್ದಾಣ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಿದ್ದು, ಈ ಕುರಿತು ಅಧಿಸೂಚನೆ ಪ್ರಕಟಿಸಿದೆ. ಮೂರು ವರ್ಷಗಳ ಹಿಂದೆ ಏಕನಾಥ್ ಶಿಂದೆ ನೇತೃತ್ವದ ಸರಕಾರ ಔರಂಗಾಬಾದ್ ನಗರಕ್ಕೆ ಛತ್ರಪತಿ ಸಂಭಾಜಿನಗರ್ ಎಂದು ಮರುನಾಮಕರಣ ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಮುಘಲ್ ಚಕ್ರವರ್ತಿ ಔರಂಗಝೇಬ್ ಸ್ಮರಣಾರ್ಥ ಔರಂಗಾಬಾದ್ ಎಂದು ನಾಮಕರಣಗೊಂಡಿದ್ದ ಈ ನಗರಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಛತ್ರಪತಿ ಸಂಭಾಜಿಗೆ ಗೌರವ ಸಲ್ಲಿಸುವ ಭಾಗವಾಗಿ ಈ ಮರುನಾಮಕರಣ ಮಾಡಲಾಗಿದೆ.

ಮೂಲತಃ ಉದ್ಧವ್ ಠಾಕ್ರೆ ನೇತೃತ್ವದ ಮಹಾವಿಕಾಸ್ ಅಘಾಡಿ ಸರಕಾರ ಚಾಲನೆ ನೀಡಿದ್ದ ಈ ಮರುನಾಮಕರಣ ಪ್ರಕ್ರಿಯೆಗೆ ಅಕ್ಟೋಬರ್ 15ರಂದು ಅಧಿಸೂಚನೆ ಹೊರಡಿಸುವ ಮೂಲಕ, ಬಿಜೆಪಿ ನೇತೃತ್ವದ ಮಹಾಯುತಿ ಸರಕಾರ ರೈಲ್ವೆ ನಿಲ್ದಾಣದ ಮರುನಾಮಕರಣವನ್ನು ಅಧಿಕೃತವಾಗಿ ಪ್ರಕಟಿಸಿತ್ತು.

ಹೈದರಾಬಾದ್ ನ ಏಳನೆ ನಿಜಾಮ ಮೀರ್ ಉಸ್ಮಾನ್ ಅಲಿ ಖಾನ್ ಆಡಳಿತಾವಧಿಯಲ್ಲಿ ನಿರ್ಮಾಣಗೊಂಡ ಈ ಐತಿಹಾಸಿಕ ರೈಲ್ವೆ ನಿಲ್ದಾಣ, 1900ರಲ್ಲಿ ಉದ್ಘಾಟನೆಗೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News