ಕಾರು ಅಪಘಾತದ ನಂತರ ಟೀಮ್ ಇಂಡಿಯಕ್ಕೆ ಪಂತ್ ಪುನರಾಗಮನ

Update: 2024-04-30 16:04 GMT

ರಿಷಭ್ ಪಂತ್ | PC : PTI 

ಮುಂಬೈ: ಜೂನ್ ನಲ್ಲಿ ನಡೆಯುವ ಟಿ20 ವಿಶ್ವಕಪ್ ಗೆ ಮಂಗಳವಾರ ಪ್ರಕಟಗೊಂಡಿರುವ ಭಾರತ ಕ್ರಿಕೆಟ್ ತಂಡದಲ್ಲಿ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. 16 ತಿಂಗಳ ಹಿಂದೆ ಭೀಕರ ಕಾರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾದ ನಂತರ ಮೊದಲ ಬಾರಿ ಅಂತರರಾಷ್ಟ್ರೀಯ ಕ್ರಿಕೆಟಿಗೆ ಪಂತ್ ಪುನರಾಗಮನ ಮಾಡಿದ್ದಾರೆ.

26ರ ಹರೆಯದ ವಿಕೆಟ್ ಕೀಪರ್-ಬ್ಯಾಟರ್ ಪಂತ್ ಈ ವರ್ಷ ಕ್ರಿಕೆಟ್ ಮೈದಾನಕ್ಕೆ ವಾಪಸಾದ ನಂತರ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳಲ್ಲಿ ಒಟ್ಟು 398 ರನ್ ಗಳಿಸಿದ್ದಾರೆ.

ಈ ವರ್ಷದ ಐಪಿಎಲ್ ನಲ್ಲಿ ಪಂತ್ 32 ಎಸೆತಗಳಲ್ಲಿ 51 ರನ್ ಗಳಿಸಿದ್ದಾಗ ಪ್ರೇಕ್ಷಕರು ಎದ್ದುನಿಂತು ಗೌರವ ಸಲ್ಲಿಸಿದರು. ಪಂತ್ 2017ರಿಂದ ಎಲ್ಲ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಆಡುತ್ತಿದ್ದು ಭಾರತದ ಪರ ಒಟ್ಟು 129 ಪಂದ್ಯಗಳನ್ನು ಆಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News