×
Ad

ಪಿಎಂ ಧನ-ಧಾನ್ಯ ಕೃಷಿ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ

Update: 2025-07-16 21:34 IST

PC : @PIB_India

ಹೊಸದಿಲ್ಲಿ,ಜು.16: ಬುಧವಾರ ನಡೆದ ಕೇಂದ್ರ ಸಂಪುಟದ ಸಭೆಯು ಆರು ವರ್ಷಗಳ ಅವಧಿಗೆ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗೆ ಅನುಮೋದನೆಯನ್ನು ನೀಡಿದೆ. ಯೋಜನೆಯು ವಾರ್ಷಿಕ 24,000 ಕೋ.ರೂ.ಗಳ ವೆಚ್ಚದೊಂದಿಗೆ 100 ಜಿಲ್ಲೆಗಳನ್ನು ಒಳಗೊಂಡಿದೆ.

ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಈ ಯೋಜನೆಯು ಅಸ್ತಿತ್ವದಲ್ಲಿರುವ 36 ಯೋಜನೆಗಳನ್ನು ವಿಲೀನಗೊಳಿಸಲಿದೆ ಹಾಗೂ ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಹೆಚ್ಚಿಸಲಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ವಿವರಗಳನ್ನು ಹಂಚಿಕೊಂಡ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ ಅವರು, ಪಿಎಂ ಧನ-ಧಾನ್ಯ ಕೃಷಿ ಯೋಜನೆಯು ಸುಗ್ಗಿಯ ನಂತರದ ಸಂಗ್ರಹಣೆಯನ್ನು ಹೆಚ್ಚಿಸುತ್ತದೆ. ನೀರಾವರಿ ಸೌಲಭ್ಯಗಳಲ್ಲಿ ಸುಧಾರಣೆಯನ್ನು ತರುತ್ತದೆ ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಯೋಜನೆಯು 1.7 ಕೋಟಿ ರೈತರಿಗೆ ನೆರವಾಗುವ ನಿರೀಕ್ಷೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News