×
Ad

ರಾಮನವಮಿ ಹಿಂಸಾಚಾರ: ಎನ್ಐಎ ತನಿಖೆಯ ವಿರುದ್ಧ ಪ.ಬಂಗಾಳದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Update: 2023-07-24 23:59 IST

Photo : ಸುಪ್ರೀಂ | PTI 

ಹೊಸದಿಲ್ಲಿ: ರಾಜ್ಯದಲ್ಲಿ ರಾಮನವಮಿ ಉತ್ಸವದ ಸಂದರ್ಭದಲ್ಲಿ ಸಂಭವಿಸಿದ್ದ ಹಿಂಸಾಚಾರದ ತನಿಖೆಯನ್ನು ಎನ್ಐಎಗೆ ವರ್ಗಾಯಿಸಿರುವುದನ್ನು ಪ್ರಶ್ನಿಸಿ ಪ.ಬಂಗಾಳ ಸರಕಾರವು ಸಲ್ಲಿಸಿದ್ದ ಮೇಲ್ಮನವಿಯನ್ನು ಸರ್ವೋಚ್ಚ ನ್ಯಾಯಾಲಯವು ಸೋಮವಾರ ವಜಾಗೊಳಿಸಿದೆ.

ಪ.ಬಂಗಾಳ ಸರಕಾರವು ಕೇಂದ್ರ ಸರಕಾರದ ಅಧಿಸೂಚನೆಯ ಮೂಲಕ ಈ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿತ್ತಾದರೂ ಅದು ಅಧಿಸೂಚನೆಯನ್ನು ಪ್ರಶ್ನಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ ಮಿಶ್ರಾ ಅವರ ಪೀಠವು ಬೆಟ್ಟು ಮಾಡಿತು.

‘ಎನ್ಐಎ ನಡೆಸಬೇಕಾದ ತನಿಖೆಯ ರೂಪುರೇಷೆಯನ್ನು ಈ ಹಂತದಲ್ಲಿ ನಿರೀಕ್ಷಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಮತ್ತು ಕೇಂದ್ರ ಸರಕಾರದ ಅಧಿಸೂಚನೆಗೆ ಸವಾಲಿನ ಅನುಪಸ್ಥಿತಿಯಲ್ಲಿ ನಾವು ಈ ಅರ್ಜಿಯನ್ನು ಪರಿಗಣಿಸುವುದಿಲ್ಲ ’ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿತು.

ಮಾ.30ರಿಂದ ಎ.2ರವರೆಗೆ ಹೌರಾ ಸೇರಿದಂತೆ ಪ.ಬಂಗಾಳದ ವಿವಿಧೆಡೆಗಳಲ್ಲಿ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಹಿಂದುಗಳು ಮತ್ತು ಮುಸ್ಲಿಮರ ನಡುವೆ ಘರ್ಷಣೆಗಳು ನಡೆದಿದ್ದವು.

ಎ.27ರಂದು ಕೋಲ್ಕತಾ ಉಚ್ಚ ನ್ಯಾಯಾಲಯವು ಹಿಂಸಾಚಾರದ ತನಿಖೆಯನ್ನು ಎನ್ಐಎಗೆ ವರ್ಗಾಯಿಸುವಂತೆ ಆದೇಶಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News